LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅತ್ಯಾಚಾರ ನಡೆಸಿ, ಬಾಲಕಿಯರನ್ನು ಮರಕ್ಕೆ ನೇಣು ಹಾಕಿದರು!

ಲಖಿಮಪುರ ಖೇರಿ : ಉತ್ತರ ಪ್ರದೇಶದ ನಿಘಾಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯದ ಇಬ್ಬರು ಸಹೋದರಿಯರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.



ಅಪ್ರಾಪ್ತ ಸಹೋದರಿಯರ ಶವಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಅವರ ಮೇಲೆ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆ ಮಾಡಿದ ವರದಿ ಬಂದಿದೆ. ಸತ್ತ ಆ ಸಹೋದರಿಯರನ್ನು ನಂತರ ಮರಕ್ಕೆ ನೇಣು ಹಾಕಿ ಆತ್ಮಹತ್ಯೆಯ ರೂಪ ನೀಡಲು ಪ್ರಯತ್ನಿಸಲಾಗಿದೆ.







ಸಂತ್ರಸ್ತೆಯ ತಾಯಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ ನಂತರ ಆರು ಆರೋಪಿಗಳನ್ನು ಪೊಲೀಸ್ ವಶಪಡಿಸಿಕೊಂಡಿದ್ದಾರೆ.



ಎಫ್ಐಆರ್ ಪ್ರಕಾರ, ಪ್ರಮುಖ ಆರೋಪಿ ಛೋಟು ತನ್ನ ಸ್ನೇಹಿತರೊಂದಿಗೆ ಸಂತ್ರಸ್ತರ ಮನೆಗೆ ನುಗ್ಗಿ ಅವರ ತಾಯಿಯನ್ನು ಥಳಿಸಿ, ಬಲವಂತವಾಗಿ ಇಬ್ಬರೂ ಬಾಲಕಿಯರನ್ನು ಅಪಹರಿಸಿ ಬೈಕ್ ನಲ್ಲಿ ಕರೆದೊಯ್ದರು. ಆರೋಪಿಗಳು ಇಬ್ಬರೂ ಸಹೋದರಿಯರ ಮೇಲೆ ಅತ್ಯಾಚಾರ ಮಾಡಿದರು ಮತ್ತು ಅವರ ದೇಹಗಳನ್ನು ಮರಕ್ಕೆ ನೇತು ಹಾಕಿದರು ಎಂದು ಎಫ್ಐಆರ್ ನಲ್ಲಿ ತಿಳಿಸಲಾಗಿದೆ.



ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 302, 323, 452, 376 ರ ಅಡಿಯಲ್ಲಿ ಕೊಲೆ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಠಿಣ ಕಾಯ್ದೆಯ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎನ್ನಲಾಗಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ