LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳ್ಳಿ ಕಾಲುಂಗುರಕ್ಕಾಗಿ 108 ವರ್ಷದ ವೃದ್ಧೆಯ ಪಾದವನ್ನೇ ಕತ್ತರಿಸಿದ ಕಳ್ಳ ರಾಕ್ಷಸರು

ಜೈಪುರ: ಎಂಥೆಂಥ ಅಮಾನವೀಯನ ಘಟನೆಗಳು ವರದಿಯಾಗುತ್ತಿದ್ದು ತೀರಾ ಮುಪ್ಪಿನ ವೃದ್ಧೆಯೊಬ್ಬರು ಧರಿಸಿದ್ದ ಬೆಳ್ಳಿಯ ಕಾಲುಂಗುರ ಕದಿಯಲು ಕಳ್ಳರು ಅವರ ಪಾದವನ್ನೇ ಕತ್ತರಿಸಿ ತೆಗೆದುಕೊಂಡು ಹೋದ ಅಮಾನುಷ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.



ಪಾದ ಕಳೆದುಕೊಂಡ  108 ವರ್ಷದ ಜಮುನಾ ದೇವಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಮುಂಜಾನೆ  5:30ರ ಸುಮಾರಿಗೆ  ಈ ಘಟನೆ ನಡೆದಿದ್ದು, ಆ ವೇಳೆ ಎಲ್ಲರೂ ಗಾಢ ನಿದ್ರೆಯಲ್ಲಿದ್ದರು ಎಂದು ಹೇಳಲಾಗಿದೆ. ಈ ಸಮಯಕ್ಕಾಗಿ ಹೊಂಚು ಹಾಕುತ್ತಿದ್ದ ಕಳ್ಳರು ವೃದ್ದೆಯನ್ನು ಮನೆಯಿಂದ ಹೊರಕ್ಕೆ ಎಳೆದೊಯ್ದು ಹರಿತವಾದ ಆಯುಧದಿಂದ ಪಾದಗಳನ್ನೇ ಕತ್ತರಿಸಿ ಕಾಲುಂಗುರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.



ಬೆಳಿಗ್ಗೆಯೇ ದೇವಸ್ಥಾನಕ್ಕೆ ಹೋಗಿದ್ದ ಮಗಳು ಮನೆಗೆ ಬಂದಾಗ ತಾಯಿ ಕಂಡಿಲ್ಲವೆಂದು ಹುಡುಕಿದಾಗ  ಮನೆಯಿಂದ ಹೊರಗೆ  ಅಜ್ಜಿ ಶತಾಯುಷಿ ವೃದ್ಧೆ ರಕ್ತಸ್ರಾವದಿಂದ ನರಳುತ್ತಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.



ಮಹಿಳೆಯ ಕಾಲು ಕತ್ತರಿಸಲು ಬಳಸಿದ್ದ ಆಯುಧ ಸ್ಥಳದಲ್ಲೇ ಪತ್ತೆಯಾಗಿದ್ದು, ಫೋರೆನ್ಸಿಕ್ ತಜ್ಞರ ಸಹಾಯದಿಂದ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಕಳ್ಳರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು