LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ಈ ವಿಷಯ ತಿಳಿದಿರಲಿ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರುಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ.



ಮಲೆಯ ಆರೋಹಣ ಕಾಲದಲ್ಲಿ ಹತ್ತು ನಿಮಿಷ ನಡೆದ ಬಳಿಕ ಐದು ನಿಮಿಷ ವಿಶ್ರಮಿಸಬೇಕು. ಸನ್ನಿಧಾನವನ್ನು ತಲಪಲು ಪರಂಪರಾಗತ ದಾರಿಯಾದ ಮರಕ್ಕೂಟ್ಟಂ, ಶರಂಕುತ್ತಿ, ನಡಪ್ಪಂದಲ್ ದಾರಿಯಲ್ಲಿ ಸಾಗಬೇಕು.



ಹದಿನೆಂಟು ಮೆಟ್ಟಿಲುಗಳನ್ನು ತಲಪುವಲ್ಲಿ ಕ್ಯೂವನ್ನು ಪಾಲಿಸಬೇಕು ಮರುಪಯಣದಲ್ಲಿ ನಡಪ್ಪಂದಲ್ನ ಮೇಲ್ಸೇತುವೆಯನ್ನು ಉಪಯೋಗಿಸಬೇಕು.



ಮಲಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನೂ ಮೂತ್ರಾಲಯ ಗಳನ್ನೂ ಬಳಸಿಕೊಳ್ಳಬೇಕು.



ಪಂಬೆಯಿಂದ ಸನ್ನಿಧಾನದತ್ತ ಪ್ರಯಾಣ ತೊಡಗುವ ಮೊದಲು ಜನಜಂಗುಳಿಯ ಒತ್ತಡದ ಬಗೆಗೆ ಮನವರಿಕೆ ಮಾಡಿಕೊಳ್ಳಬೇಕು.



ಡೋಲಿಯನ್ನು ಬಳಸಿಕೊಳ್ಳುವಲ್ಲಿ ದೇವಸ್ವಂ ಕೌಂಟರಿನಲ್ಲಿ ಮಾತ್ರ ಅದರ ದರವನ್ನು ಕೊಟ್ಟು ರಸೀದಿ ಪಡೆದು ಅದನ್ನು ಜಾಗರೂಕತೆಯಿಂದ ತೆಗೆದಿಟ್ಟುಕೊಳ್ಳಬೇಕು



ಭದ್ರತಾ ಚೆಕ್ ಪಾಯಿಂಟಗಳಲ್ಲಿ ಭದ್ರತಾ ತಪಾಸಣೆಗಾಗಿ ನೀವೇ ಸಿದ್ಧರಾಗಿರಿ. ಯಾವುದೇ ನೆರವಿಗಾಗಿ ಪೋಲೀಸರನ್ನು ಸಂಪರ್ಕಿಸಬೇಕು



ಸಂಶಯಾಸ್ಪದವಾದ ಯಾವುದನ್ನೇ ಕಂಡರೂ ಕೂಡಲೇ ಪೊಲೀಸರಿಗೆ ತಿಳಿಸಬೇಕು.



ಪರವಾನಗಿ ಇರುವ ಅಂಗಡಿಗಳಿಂದ ಮಾತ್ರವೇ ಖಾದ್ಯ ವಸ್ತುಗಳನ್ನು ಖರೀದಿಸಬೇಕು



ಪಂಬ, ಸನ್ನಿಧಾನ, ಮಲೆಯ ಆರೋಹಣದ ದಾರಿ, ಎಲ್ಲವನ್ನೂ ನಿರ್ಮಲವಾಗಿರುವಂತೆ ನೋಡಿಕೊಳ್ಳಬೇಕು.



ನಿಗದಿಪಡಿಸಿದ ಪಾರ್ಕಿಂಗ್ ಸ್ಥಳದಲ್ಲಿ ಮಾತ್ರ ವಾಹನಗಳನ್ನು ನಿಲ್ಲಿಸಿ ತ್ಯಾಜ್ಯಗಳನ್ನು ಅದಕ್ಕಾಗಿ ಮೀಸಲಾಗಿರಿಸಿದ ತ್ಯಾಜ್ಯ ಪೆಟ್ಟಿಗೆಗಳಲ್ಲಿ ಹಾಕಿರಿ.



ಆಕ್ಸಿಜನ್ ಪಾರ್ಲರ್ ಮತ್ತು ಮೆಡಿಕಲ್ ಸೆಂಟರುಗಳ ಸೌಕರ್ಯ ಗಳನ್ನು ಅವಶ್ಯಕತೆಗೆ ಅನುಸಾರವಾಗಿ ಉಪಯೋಗಿಸಿಕೊಳ್ಳಬೇಕು.



ಮಕ್ಕಳು, ವೃದ್ಧರ ಕುತ್ತಿಗೆಯಲ್ಲಿ ವಿಳಾಸ, ದೂರವಾಣಿ ಸಂಖ್ಯೆಗಳನ್ನು ಬರೆದ ಗುರುತಿನ ಕಾರ್ಡನ್ನು ನೇತು ಹಾಕಿರಿ



ಗುಂಪುಗಳು ಅಥವಾ ಸ್ನೇಹಿತರಿಂದ ಬೇರ್ಪಟ್ಟು ಹೋದ ಸಂದರ್ಭಗಳಲ್ಲಿ ಪೊಲೀಸ್ ನೆರವು ಪೋಸ್ಟುಗಳ ಸಹಾಯವನ್ನು ಪಡೆಯಿರಿ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ