LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಕ್ಕಳ ಕಳ್ಳತನ ಆರೋಪ : ಮೂವರ ಬಂಧನ 

ಬೆಳಗಾವಿ : ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ನಡೆದಿದೆ.



ಆದರೆ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು.



ಈ ವೇಳೆ ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು ಕಂಡು ಊರಿನ ಜನ ಗುಂಪಾಗಿ ಸೇರಿದರು. ತನ್ನನ್ನು ಎಳೆದುಕೊಂಡು ಹೋಗಲು ಯತ್ನಿಸಿದರು ಎಂದು ಬಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.



ಜನ ಸೇರಿರುವುದನ್ನು ಕಂಡು ಮೂವರು ಪರಾರಿಯಾಗಿದ್ದು, ಮೂವರನ್ನು ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ.



ಆದರೆ, ತಾವು ಉತ್ತರ ಪ್ರದೇಶದಿಂದ ವ್ಯಾಪಾರ ಮಾಡುತ್ತ ಊರೂರು ಅಲೆಯುವುದಾಗಿ ಆರೋಪಿಗಳು ಹೇಳಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ