LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಥಣಿ ಬಳಿ ಸರಣಿ ಅಪಘಾತ : ಮೂವರು ಬಲಿ

ಅಥಣಿ : ಇಲ್ಲಿಯ ಬಣಜವಾಡ ಕಾಲೇಜು ಬಳಿಯ ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬಲಿಯಾಗಿದ್ದಾರೆ. ಗುರುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.



ಕೊಲ್ಲಾಪುರ ಜಿಲ್ಲೆ ಶಿರೋಳ ತಾಲೂಕು ಗಣೇಶವಾಡಿ ಗ್ರಾಮದ ಮಹೇಶ ಸುಭಾಷ ಗಾತಾಡೆ (30), ಶಿರೋಳ ತಾಲೂಕು ಪುಡವಾಡ ಗ್ರಾಮದ ಶಿವಂ ಯುವರಾಜ ಚವಾಣ (24) ಮತ್ತು ಸಾಂಗ್ಲಿ ಜಿಲ್ಲೆ ಮಿರಜ ತಾಲೂಕಿನ ಕವಲಾಪುರ ಗ್ರಾಮದ ಸಚಿನ ವಿಲಾಸ ಮಾಳಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಮೊದಲಿಗೆ ಕಾಗವಾಡ ಕಡೆಯಿಂದ ಕೆಂಪು ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಮತ್ತು ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ನಡುವೆ ಅಪಘಾತವಾಗಿದೆ. ಗಾಯಗೊಂಡ ಚಾಲಕ ಮತ್ತು ಕ್ಲೀನರ್ ಸಹಾಯಕ್ಕೆ ಬೇಡಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಸ್ಕಾರ್ಪಿಯೋ ಚಾಲಕ ತನ್ನ ವಾಹನವನ್ನು ಬದಿಗೆ ಸರಿಸಿ ಅವರನ್ನು ರಕ್ಷಿಸಲು ಮುಂದಾದಾಗ ಅಥಣಿ ಕಡೆಯಿಂದ ಬಂದ ಇನೋವಾ ಕಾರು ನೇರವಾಗಿ ರಕ್ಷಿಸಲು ಮುಂದಾದ ವ್ಯಕ್ತಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.



ದುರ್ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅಥಣಿಯ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ, ಪಿಕಪ್ ವಾಹನ, ಇನೋವಾ ಮತ್ತು ಸ್ಕಾರ್ಪಿಯೋ ನಡುವೆ ಈ ಅಪಘಾತ ಸಂಭವಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ