LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಥಣಿ ಬಳಿ ಸರಣಿ ಅಪಘಾತ : ಮೂವರು ಬಲಿ

ಅಥಣಿ : ಇಲ್ಲಿಯ ಬಣಜವಾಡ ಕಾಲೇಜು ಬಳಿಯ ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬಲಿಯಾಗಿದ್ದಾರೆ. ಗುರುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.



ಕೊಲ್ಲಾಪುರ ಜಿಲ್ಲೆ ಶಿರೋಳ ತಾಲೂಕು ಗಣೇಶವಾಡಿ ಗ್ರಾಮದ ಮಹೇಶ ಸುಭಾಷ ಗಾತಾಡೆ (30), ಶಿರೋಳ ತಾಲೂಕು ಪುಡವಾಡ ಗ್ರಾಮದ ಶಿವಂ ಯುವರಾಜ ಚವಾಣ (24) ಮತ್ತು ಸಾಂಗ್ಲಿ ಜಿಲ್ಲೆ ಮಿರಜ ತಾಲೂಕಿನ ಕವಲಾಪುರ ಗ್ರಾಮದ ಸಚಿನ ವಿಲಾಸ ಮಾಳಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಮೊದಲಿಗೆ ಕಾಗವಾಡ ಕಡೆಯಿಂದ ಕೆಂಪು ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಮತ್ತು ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ನಡುವೆ ಅಪಘಾತವಾಗಿದೆ. ಗಾಯಗೊಂಡ ಚಾಲಕ ಮತ್ತು ಕ್ಲೀನರ್ ಸಹಾಯಕ್ಕೆ ಬೇಡಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಸ್ಕಾರ್ಪಿಯೋ ಚಾಲಕ ತನ್ನ ವಾಹನವನ್ನು ಬದಿಗೆ ಸರಿಸಿ ಅವರನ್ನು ರಕ್ಷಿಸಲು ಮುಂದಾದಾಗ ಅಥಣಿ ಕಡೆಯಿಂದ ಬಂದ ಇನೋವಾ ಕಾರು ನೇರವಾಗಿ ರಕ್ಷಿಸಲು ಮುಂದಾದ ವ್ಯಕ್ತಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.



ದುರ್ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅಥಣಿಯ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ, ಪಿಕಪ್ ವಾಹನ, ಇನೋವಾ ಮತ್ತು ಸ್ಕಾರ್ಪಿಯೋ ನಡುವೆ ಈ ಅಪಘಾತ ಸಂಭವಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ