LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕುಡಿತದ ಚಟ ಬಿಡಿಸಲು ನೀಡಿದ್ದ ಔಷಧಿ ಸೇವಿಸಿ ಮೂವರ ಸಾವು!

ಕಲಬುರಗಿ : ಕುಡಿತದ ಚಟ ಬಿಡಿಸಲು ನಾಟಿ ಔಷಧ ಸೇವಿಸಿದ್ದ ಸೇಡಂ ತಾಲೂಕಿನ ಇಮಡಾಪೂರ ಗ್ರಾಮದಲ್ಲಿ ಮೂವರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ.



ಇದೇ ಔಷಧ ಸೇವಿಸಿದ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೃತರನ್ನು ಸೇಡಂ ತಾಲೂಕಿನ ಬುರುಗಪಲ್ಲಿ ಗ್ರಾಮದ ಲಕ್ಷ್ಮೀ ನರಸಿಂಹಲು (45), ಶಹಬಾದ ಪಟ್ಟಣದ ಗಣೇಶ ಬಾಬು ರಾಠೋಡ (24) ಮತ್ತು ಮದಕಲ್‌ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಎಂದು ಗುರುತಿಸಲಾಗಿದೆ.



ಇವರೆಲ್ಲರೂ ಕುಡಿತದ ಚಟವನ್ನು ಬಿಡಲು ಸ್ಥಳೀಯವಾಗಿ ಲಭ್ಯವಾದ ನಾಟಿ ಔಷಧವನ್ನು ಸೇವಿಸಿದ್ದರು. ಆದರೆ, ಔಷಧ ಸೇವಿಸಿದ ಕೆಲವೇ ಗಂಟೆಗಳಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.



ಕುಡಿತದ ಚಟ ಬಿಡಿಸುತ್ತೇನೆ ಎಂದು ಮದ್ಯ ವ್ಯಸನಿಗಳ ಮೂಗಿನಲ್ಲಿ ನಾಟಿ ಔಷಧಿ ಹಾಕಿದ್ದರು. ಈ ಔಷಧಿಯಿಂದ ಲಕ್ಷ್ಮೀ ನರಸಿಂಹಲು ಹಾಗೂ ಗಣೇಶ ಬಾಬು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.



ಇದೇ ಔಷಧವನ್ನು ಸೇವಿಸಿದ ಲಕ್ಷ್ಮೀ ನರಸಿಂಹಲು ಪುತ್ರ ನಿಂಗಪ್ಪ ನರಸಿಂಹಲು ಗಂಭೀರ ಸ್ಥಿತಿಯಲ್ಲಿದ್ದು, ಕಲಬುರಗಿಯ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಮದರ್ಶಿಯ ಮನವಿ : ಸುರಕ್ಷಿತವಲ್ಲದ ಅನಧಿಕೃತ ಯಾವುದೇ ಔಷಧಿಯನ್ನು ಸೇವಿಸುವ ಮುನ್ನ ವೈದ್ಯಕೀಯ ಸಲಹೆ ಪಡೆಯಿರಿ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ