LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭಾರಿ ಮಳೆಗೆ ಗೋವಾ ಹೋಗುವ ಮೂರು ರಸ್ತೆಗಳು ಬಂದ್!

ಬೆಳಗಾವಿ, ೨೫: ಕಳೆದ ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಗೋವಾ ಸಂಪರ್ಕ ಕಲ್ಪಿಸುವ ಇನ್ನೆರಡು ರಸ್ತೆಗಳು ಪ್ರವಾಹದ ಕಾರಣ ಸ್ಥಗಿತ ಆಗಿವೆ.



ಹಲತ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಖಾನಾಪುರ-ಜಾಂಬೋಟಿ-ಗೋವಾ ಹೆದ್ದಾರಿಯನ್ನು ಸಹ ಮುಚ್ಚಲಾಗಿದೆ.



ಅಲ್ಲದೇ ಖಾನಾಪುರ-ಹೆಮ್ಮಡಗಾ-ಅನಮೋಡ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಭೀಮಗಡ ಸಮೀಪದ ಮಂತುರ್ಗಾ ಬಳಿಯ ಹತಲತ್ರಿ ನದಿ ಮೇಲಿನ ಸೇತುವೆ ಮೇಲೆ 5 ಅಡಿ ನೀರು ಹರಿಯುತ್ತಿರುವುದರಿಂದ ಅಲ್ಲಿ ಸಂಚಾರ ಸ್ಥಗಿತವಾಗಿದೆ.



ಈಗಾಗಲೇ ಬೆಳಗಾವಿ-ಜಾಂಬೋಟಿ ರಸ್ತೆಯ ಕುಸಮಳ್ಳಿ ಸೇತುವೆಯ ಕುಸಿತದಿಂದ ರಸ್ತೆ ಬಂದ್‌ ಆಗಿದ್ದರಿಂದ ಗೋವಾ ಹೋಗಲು ಖಾನಾಪುರ-ಜಾಂಬೋಟಿ ಮೂಲಕ ವಾಹನಗಳು ಸಂಚರಿಸುತ್ತಿದ್ದವು. ಈಗ ಆ ರಸ್ತೆಯ ಸಂಚಾರ ಸಹ ಸಂಪೂರ್ಣವಾಗಿ ಬಂದಾಗಿದೆ.







ಹಬ್ಬಾನಟ್ಟಿಯ ಐತಿಹಾಸಿಕ ಮಾರುತಿ ದೇವಸ್ಥಾನವು ನೀರಿನಲ್ಲಿ ಮುಳುಗಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಮಾರ್ಗದಲ್ಲಿ ಪ್ರಯಾಣಿಸುವುದನ್ನು ತಪ್ಪಿಸಲು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ