LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ 

ಹುಬ್ಬಳ್ಳಿ: ಟಿಪ್ಪು ಜಯಂತಿ ಆಚರಣೆಗೆ ಹು-ಧಾ ಮಹಾನಗರ ಪಾಲಿಕೆ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಶಸ್ವಿಯಾಗಿ ಟಿಪ್ಪು ಜಯಂತಿ ಮಾಡಲಾಗಿದೆ.



ಎಐಎಂಐಎಂ ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಟಿಪ್ಪು ಜಯಂತಿ ಆಚರಿಸಲಾಗಿದೆ. ಎಐಎಂಐಎಂ ಕಾರ್ಯಕರ್ತರು ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಟಿಪ್ಪು ಸುಲ್ತಾನ​​ ಪರ ಘೋಷಣೆ ಕೂಗಿ ಟಿಪ್ಪು ಜಯಂತಿ ಆಚರಿಸಿದರು.



ಹುಬ್ಬಳ್ಳಿ- ಧಾರವಾಡ ಮಹಾನಗರಪಾಲಿಕೆ ಹಲವು ಷರತ್ತುಗಳ ವಿಧಿಸಿ ಆಚರಣೆಗೆ ಅನುಮತಿ ನೀಡಿತ್ತು. 10 ಸಾವಿರ ರೂ. ಪಾವತಿಸಬೇಕು, ಟಿಪ್ಪು ಸುಲ್ತಾನ್ ಫೋಟೋ ಬಿಟ್ಟು ಬೇರೆ ಫೋಟೋ ಹಾಕದಂತೆ ಷರತ್ತು ಹಾಕಿತ್ತು.



ಅದರಂತೆಯೇ ವಿಜಯ ಗುಂಟ್ರಾಳ​ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ನೆರವೇರಿದೆ. ಕಾರ್ಯಕ್ರಮದಲ್ಲಿ ಅಂಜುಮನ್ ಕಮೀಟಿ ಸದಸ್ಯರು, ಮುಸ್ಲಿಂ ಬಾಂಧವರು ಸೇರಿದಂತೆ ಹಲವರು ಭಾಗಿಯಾಗಿದ್ದು ಟಿಪ್ಪು ಸುಲ್ತಾನ ಪರ ಜೈಘೋಷ ಕೂಗಿ ಸಂಭ್ರಮಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ