LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ; 4 ಸಾವು

ಬೀದರ, 28 : ಮಹಾರಾಷ್ಟ್ರ ಮೂಲದ ಗುತ್ತಿಗೆ ಕಾರ್ಮಿಕರನ್ನು ಆಂಧ್ರ ಪ್ರದೇಶಕ್ಕೆ ಸಾಗಿಸುತ್ತಿದ್ದ ರಿಕ್ಷಾ ಮಾದರಿಯ ಟಾಟಾ ಎಸ್ ವಾಹನಕ್ಕೆ ಕಬ್ಬು ಸಾಗಿಸುತ್ತಿದ್ದ ಟ್ರಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ, ಐದು ಜನ ಗಾಯಗೊಂಡ ಘಟನೆ ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.



ಗಾಯಗೊಂಡವರನ್ನು ಬೀದರ್ ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.



ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರನಿಂದ ಹೈದ್ರಾಬಾದ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗೀರ ದಾವಲಸಾಬ (36) ರಸೀದಾ ಶೇಖ (41) ಟಾಟಾ ಎಸಿ ಚಾಲಕ ವಲಿ (31) ಇಮಾಮ ಶೇಖ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ