LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯಲ್ಲಿ ಕಲ್ಲು ತೂರಾಟ; ಇಬ್ಬರಿಗೆ ಗಾಯ

ಬೆಳಗಾವಿ, ಮೇ ೨೩:  ಗುರುವಾರ ಸಂಜೆ ನಗರದ ಶಹಾಪುರದ ಅಳವನ ಗಳ್ಳಿಯಲ್ಲಿ ಬಾಲಕರ ಎರಡು ತಂಡಗಳ ಕ್ರಿಕೆಟ್ ಆಟದಲ್ಲಿ ನಡೆದ ವಾಗ್ವಾದ ಹಿಂಸಾಚಾರಕ್ಕೆ ತೆರಳಿ ವ್ಯಾಪಕವಾಗಿ ಕಲ್ಲು ತೂರಾಟ ನಡೆದಿದ್ದು ಇಬ್ಬರು ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ  ಸೇರಿಸಲ್ಪಟ್ಟಿದ್ದಾರೆ.



ಅಳವನ ಗಲ್ಲಿಯ ಎರಡು ಕ್ರಿಕೆಟ್ ತಂಡಗಳು ಗುರುವಾರ ಸಂಜೆ ಯಥಾ ಪ್ರಕಾರ ಹತ್ತಿರದ ಮೈದಾನದಲ್ಲಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದವು. ಆಗ ಯಾವುದೋ ಕಾರಣಕ್ಕೆ ಜಗಳ ಉಂಟಾಗಿದೆ. ಆದರೆ ಅದು ಮೈದಾನದಿಂದ ಹೊರಗೆ ಬಂದು ಉಭಯ ತಂಡಗಳ ಸದಸ್ಯರು ವಾಸವಾಗಿರುವ ನಿವಾಸ ಸ್ಥಳಕ್ಕೂ ವಿಸ್ತರಿಸಿಕೊಂಡಿದೆ.



ಕೆಲವರು ತಮ್ಮ ವಿರೋಧಿ ತಂಡದ ಅಳವಣ ಗಲ್ಲಿಯ ಆಟಗಾರರ ನಿವಾಸಗಳ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ತೂರಿದರು. ಅವುಗಳಲ್ಲಿ ಕೆಲವು ಜನರ ಮೇಲೆ ಬಿದ್ದಿವೆ. ಇದರಿಂದ ಇಬ್ಬರು ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.



ಘಟನೆಯ ನಂತರ ಸಂಪೂರ್ಣ ಶಹಾಪುರ ವಲಯದಲ್ಲಿ ವಾಣಿಜ್ಯ ವ್ಯವಹಾರ ರಾತ್ರಿ  ಎಂಟು ಗಂಟೆಯಿಂದ ಸ್ಥಗಿತಗೊಂಡಿದೆ.



ಪೊಲೀಸ್ ಆಯುಕ್ತ ಎಡಾ ಮಾರ್ಟೀನ್ ಸ್ಥಳಕ್ಕೆ ಭೆಟ್ಟಿ ನೀಡಿದ್ದಾರೆ. ಕೆಲವರು ಘಟನೆಗೆ ಕೋಮು ಬಣ್ಣ ಲೇಪಿಸುವುದರಿಂದ ಅಳವಣ ಗಲ್ಲಿಗೆ ಹೋಗುವ ಎಲ್ಲ ಮಾರ್ಗಗಳನ್ನು ಬ್ಯಾರಿಕೇಡಗಳನ್ನು ಹಾಕಿ ಬಂದ್ ಮಾಡಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ