LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಲಾಟೆಯಲ್ಲಿ ವ್ಯಕ್ತಿ ಕೊಲೆ- ಇಬ್ಬರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿದೆ.



ಶಿವಾಜಿ ನಗರದ ನವೀನ ಶೆಟ್ಟಿ ಹಾಗೂ ಹಿಡಕಲ್ ಡ್ಯಾಮ್‌ನ ಶಶಿಕುಮಾರ ಉದ್ದಪ್ಪಗೋಳ ಶಿಕ್ಷೆಗೆ ಒಳಗಾದವರು. ಇವರ ಸ್ನೇಹಿತ ವಿನಾಯಕ ಕೊಲೆಯಾದವನು.



ನಗರದ ಲಾಡ್ಜ್ ಒಂದರಲ್ಲಿ ಇವರು ಪಾರ್ಟಿ ಮಾಡಿದ್ದರು. ಕುಡಿದ ಮತ್ತಿನಲ್ಲಿ ಡಿ.ಜೆ ಸೌಂಡನ್ನು ಜೋರಾಗಿ ಹಾಕಿಕೊಂಡು ಕುಣಿಯುತ್ತಿದ್ದರು. ಶಬ್ದ ಕಡಿಮೆ ಮಾಡು ಎಂದಿದ್ದಕ್ಕೆ ಜಗಳ ಆರಂಭವಾಗಿ, ವಿನಾಯಕನ ಕೊಲೆ ಮಾಡಲಾಗಿತ್ತು.



ಬೆಳಗಾವಿ ಮಾರ್ಕೆಟ್ ಪೊಲೀಸರು ಪ್ರಕರಣದ ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಮಾಡಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್‌.ಗಂಗಾಧರ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಭಾರತಿ ಹೊಸಮನಿ ವಾದ ಮಂಡಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು