LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಾರ್ಟಿ ಮಾಡಿ ಬರುತ್ತಿದ್ದ ಇಬ್ಬರ ಸಾವು, ಇನ್ನಿಬ್ಬರಿಗೆ ಗಾಯ

ಬೆಳಗಾವಿ: ರಸ್ತೆ ಪಕ್ಕದ ಸೇತುವೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಖಾನಾಪುರ ಪಟ್ಟಣದ ಹೊರವಲಯದ ಬಾಚೋಳಿ ಕ್ರಾಸ್ ಬಳಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.



ಬೆಳಗಾವಿ ತಾಲೂಕಿನ ಮಚ್ಚೆ ನಿವಾಸಿ, ಕಾರು ಚಾಲಕ ಶಂಕರ ಮೋಹನ ಗೋಮನ್ನಾಚೆ (27), ಈತನ ಸ್ನೇಹಿತ, ತಾಲೂಕಿನ ಹತ್ತರವಾಡ ನಿವಾಸಿ ಆಶೀಷ ಮೋಹನ ಪಾಟೀಲ (26) ಮೃತಪಟ್ಟಿದ್ದಾರೆ. ಅಲ್ಲದೇ ಮಚ್ಚೆ ಗ್ರಾಮದ ನಿಖೇಶ ಜಯವಂತ ಪವಾರ (26) ಹಾಗೂ ಜ್ಯೋತಿಬಾ ಗೋವಿಂದ ಗಾಂವಕರ (29) ದುರ್ಘಟನೆಯಲ್ಲಿ ಗಾಯಗೊಂಡಿದ್ದಾರೆ.



ಶಂಕರ ಹಾಗೂ ಆತನ ಸ್ನೇಹಿತರು ಸೇರಿ ಖಾನಾಪುರಕ್ಕೆ ಪಾರ್ಟಿ ಮಾಡಲು ಹೋಗಿದ್ದರು ಎನ್ನಲಾಗಿದೆ. ಪಾರ್ಟಿ ಮುಗಿಸಿ ಜಾಂಬೋಟಿ ಮಾರ್ಗವಾಗಿ ಬೆಳಗಾವಿಗೆ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇಳಿಜಾರಿನ ರಸ್ತೆಯಲ್ಲಿ ಕಾರು ಅತಿವೇಗದಲ್ಲಿ ಬಂದು ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡು ಚಕ್ರಗಳು ಕಿತ್ತು 100 ಮೀಟರ್ ದೂರದವರೆಗೆ ಬಿದ್ದಿವೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಖಾನಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರ ಮೃತದೇಹಗಳನ್ನು ಖಾನಾಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ