LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯಲ್ಲಿ ಜೋಡಿ ಕೊಲೆ ಪ್ರಕರಣ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆಯಲ್ಲಿ ಮಾರಿಹಾಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.



ಬೆಳಗಾವಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರು ಆದೇಶ ಹೊರಡಿಸಿದ್ದಾರೆ. ಮಾರಿಹಾಳ ಠಾಣೆ ಹೆಡ್​​ಕಾನ್ಸಟೇಬಲ್ ಬಿ.ಎಸ್.ಬಳಗಣ್ಣವರ, ಆರ್.ಎಸ್.ತಳೇವಾಡೆ ಅವರನ್ನು ಅಮಾನತ್ತು ಮಾಡಲಾಗಿದೆ.



ಅಕ್ಟೋಬರ 6ರಂದು ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ರಾತ್ರಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಮಹೇಶ​, ಪ್ರಕಾಶ ಎಂಬುವರ ಹತ್ಯೆಯಾಗಿತ್ತು. ಗ್ಯಾಂಗ್​​ವಾರ್​ ಬಗ್ಗೆ ಮಾಹಿತಿ ಇದ್ದರೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿದ ಆರೋಪ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST