LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕ್ಷುಲ್ಲಕ ಜಗಳ; ಇಬ್ಬರಿಗೆ ಚಾಕು ಇರಿತ 

ರಾಮದುರ್ಗ: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.



ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ ಬಂಡಿವಡ್ಡರ್‌ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ ಎಂಬ ಯುವಕನ ತಲೆಗೆ ರಾಡ್​ನಿಂದ ಹಲ್ಲೆ ಮಾಡಲಾಗಿದೆ.



ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST