LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕರ್ನಾಟಕದಲ್ಲಿ ಮತದಾನ; ಗೋವಾದಲ್ಲಿ ವೇತನಸಹಿತ ರಜೆ ಘೋಷಿಸಿದ ಸರ್ಕಾರ

ಪಣಜಿ : ಕರ್ನಾಟಕದಲ್ಲಿ ದಿ.10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮತದಾನ ಮಾಡಲು ಅನುಕೂಲವಾಗುವಂತೆ ಗೋವಾದ ಬಿಜೆಪಿ ಸರ್ಕಾರವು ಖಾಸಗಿ ಸಂಸ್ಥೆಗಳು ಮತ್ತು ಕೈಗಾರಿಕಾ ಕಾರ್ಮಿಕರಿಗೆ ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ.



ಪ್ರಮೋದ ಸಾವಂತ ಸರ್ಕಾರದ ಈ ನಿರ್ಧಾರಕ್ಕೆ ಗೋವಾದ ವಿರೋಧ ಪಕ್ಷಗಳು ಮತ್ತು ಉದ್ಯಮ ಸಂಸ್ಥೆಗಳಿಂದ ವಿರೋಧ ವ್ಯಕ್ತವಾಗಿದೆ. ಗೋವಾ ರಾಜ್ಯ ಕೈಗಾರಿಕೆಗಳ ಸಂಘವು ರಜೆಯ ವಿರುದ್ಧ ಕಾನೂನು ಮೊರೆ ಹೋಗಬೇಕಾಗಬಹುದು ಎಂದು ಹೇಳಿದೆ. ಆದರೆ, ನೆರೆಯ ರಾಜ್ಯಗಳಲ್ಲಿ ಚುನಾವಣೆ ಇದ್ದಾಗ ರಜೆ ನೀಡುವುದು ವಾಡಿಕೆ ಎಂದು ಗೋವಾ ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



ಕಳೆದ ವರ್ಷ ಗೋವಾದಲ್ಲಿ ನಡೆದ ಮತದಾನದ ದಿನದಂದು ಕರ್ನಾಟಕದಲ್ಲಿ ರಜೆ ಘೋಷಿಸಲಾಗಿತ್ತು. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ವೇತನ ಸಹಿತ ರಜೆ ಎಂದು ಗೋವಾ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.



ಸರ್ಕಾರಿ ನೌಕರರು ಮತ್ತು ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ರಜೆಯನ್ನು ವಿಸ್ತರಿಸಲಾಗಿದೆ ಎಂದು ಅದು ಹೇಳಿದೆ. ಗೋವಾ ರಾಜ್ಯ ಕೈಗಾರಿಕೆಗಳ ಸಂಘದ ಅಧ್ಯಕ್ಷ ದಾಮೋದರ ಕೋಚಕರ ರಾಜ್ಯ ಸರ್ಕಾರದ “ಅಸಂಬದ್ಧ” ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ್ದಾರೆ. “ಗೋವಾದ ಕೈಗಾರಿಕೆಗಳು ಇದು ಸಂಪೂರ್ಣವಾಗಿ ಅಸಂಬದ್ಧ ನಿರ್ಧಾರವೆಂದು ಭಾವಿಸುತ್ತದೆ ಎಂದು ಕೋಚರ ಆರೋಪಿಸಿದರು. ರಾಜ್ಯ ಸರ್ಕಾರದ ಇಂತಹ “ಏಕಪಕ್ಷೀಯ” ನಿರ್ಧಾರಗಳ ವಿರುದ್ಧ ಕಾನೂನು ಕ್ರಮಗಳನ್ನು ಪರಿಗಣಿಸುವುದಾಗಿ ಅವರು ಹೇಳಿದರು.



ಆಮ್ ಆದ್ಮಿ ಪಕ್ಷದ ಗೋವಾ ಘಟಕದ ಅಧ್ಯಕ್ಷ ಅಮಿತ ಪಾಲೇಕರ ಕೂಡ ʼಈ ನಿರ್ಧಾರ”ದ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.



ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟ, ಗದಗ ಆದಿ ಜಿಲ್ಲೆಗಳ ಲಕ್ಷಾಂತರ ಕಾರ್ಮಿಕರು ಕೆಲಸ ಅರಸಿ ಗೋವಾದಲ್ಲಿ ನೆಲೆಸಿದ್ದಾರೆ.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ