LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಹಿಂದಿ ಹೇರಿಕೆ ವಿರುದ್ಧ ವಾಟಾಳ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ ಆಚರಣೆಯ ಹೆಸರಲ್ಲಿ ಹಿಂದಿ ಹೇರುತ್ತಿರುವ ವಿರುದ್ಧ ವಾಟಾಳ ನಾಗರಾಜ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ವಾಟಾಳ ನಾಗರಾಜ ಅವರು ಹಿಂದಿ ದಿವಸ ವಿರೋಧಿಸಿ ಅಕ್ಟೋಬರ್ 15 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆಕೊಟ್ಟಿದ್ಧಾರೆ.



ವಾಟಾಳ ನಾಗರಾಜ ಅವರು ಈ ಸಂದರ್ಭದಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಹಿಂದಿ ದಿವಸ ಆಚರಣೆ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯಕ್ಕೆ ಕೇಂದ್ರದ ಮಂತ್ರಿ ಯಾರೇ ಬಂದರೂ ಕಾರ್ಯಕ್ರಮ ಕನ್ನಡದಲ್ಲೇ ಆಗಬೇಕು ಎಂದರು.



ಹಿಂದಿ ದಿವಸ ವಿರೋಧಿಸಿ ಅಕ್ಟೋಬರ್ 15 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆಕೊಟ್ಟಿದ್ದು ಎಲ್ಲಾ ಕನ್ನಡಪರ ಸಂಘಟನೆಗಳು ಒಟ್ಟಾಗಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಬೇಕು. ಎಲ್ಲಾ ಜಿಲ್ಲಾ ಕೇಂದ್ರ ಕಚೇರಿಗಳ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ರಾಜ್ಯಾದ್ಯಂತ ಕೇಂದ್ರ ಕಚೇರಿ ಕಟ್ಟಡಗಳ ಮೇಲೆ ಇರುವ ಹಿಂದಿ ಬೋರ್ಡಗಳಿಗೆ ಮಸಿ ಬಳಿಯಲಾಗುವುದು ಎಂದರು.



ಹಿಂದಿ ಬೋರ್ಡ ತೆರವು ಮಾಡಿ ಹಿಂದಿಭೂತ ದಹನ ಮಾಡಲಾಗುವದು. ಕರ್ನಾಟಕದಲ್ಲಿ ಕನ್ನಡ ಚಿತ್ರಗಳು ಮಾತ್ರ ಪ್ರದರ್ಶನ ಆಗಬೇಕು, ಬ್ಯಾಂಕ್ ವ್ಯವಹಾರ ಸಂಪೂರ್ಣವಾಗಿ ಕನ್ನಡದಲ್ಲೇ ಇರಬೇಕು, ಕನ್ನಡ ಶಾಲೆಗಳಿಗೆ ಮೊದಲ ಆದ್ಯತೆ ನೀಡಬೇಕು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಲಾಗುತ್ತದೆ ಎಂದು ವಾಟಾಳ ನಾಗರಾಜ ವಿವರಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ