LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ನಗರಕ್ಕೆ ಬಂತು ಕಾಡಾನೆ!

ಬೆಳಗಾವಿ‌, ೧:  ಆಹಾರ ಅರಸಿ ಕಾಡಿನಿಂದ ಬೆಳಗಾವಿಗೆ ಬಂದ ಆನೆಯೊಂದು ಶುಕ್ರವಾರ ನಸುಕಿನ ಜಾವ ನಗರದ ಹೊರವಲಯದ ಹಿಂಡಾಲ್ಕೋ ಬಳಿಯ ಕಂಗ್ರಾಳಿಯಲ್ಲಿ ನಂತರ ಬಾಕ್ಸಿಟ್ ರಸ್ತೆಯ ಆಜಮ ನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ನಾಗರಿಕರಲ್ಲಿ ಆತಂಕ, ಮಕ್ಕಳಲ್ಲಿ ಸಂಭ್ರಮಕ್ಕೆ ಕಾರಣವಾಗಿತ್ತು.



ಅದೃಷ್ಟವಶಾತ್‌ ಯಾವುದೇ ಜೀವ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ. ಅದು ಬಹುಶ: ಕಾಕತಿ ಅರಣ್ಯ ಪ್ರದೇಶದಿಂದ ಬಂದಿದೆ ಎನ್ನಲಾಗಿದೆ.



ನಸುಕಿನ ಜಾವ ಕಂಗ್ರಾಳಿಯಲ್ಲಿ ವಾಕಿಂಗ್‌ ಹೋಗುತ್ತಿದ್ದ ಜನರು ಮೊದಲು ಆನೆಯನ್ನು ಕಂಡು ದಂಗಾದರು. ಈ ವಿಷಯ ನಗರದಲ್ಲಿ ಹರಡುತ್ತಿದ್ದಂತೆ ಜನ ತಂಡೋಪತಂಡವಾಗಿ ಆಗಮಿಸಿ ಆನೆ ನೋಡಲು ಮುಗಿಬಿದ್ದರು. ಆನೆ ಸಂಚಾರಿಸಿದೆಡೆಯಲ್ಲಿ ಜನ ವಿಡಿಯೋ ರೆಕಾರ್ಡಿಂಗ್ ಮಾಡುವುದು ಮತ್ತು ದೂರದಿಂದಲೇ ಸೆಲ್ಫಿ ತೆಗೆದುಕೊಳ್ಳುವುದು ಸಾಮಾನ್ಯವಾಗಿತ್ತು.



ಸುಮಾರು ಮೂರು ಗಂಟೆಗಳ ಕಾಲ ಕಂಗ್ರಾಳಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಚರಿಸಿದ ಆನೆಯು ಉಚಗಾವಿ ಕಡೆ ಸಾಗಿದೆ. ಕಾಡಾನೇ ನಗರಕ್ಕೆ ನುಗ್ಗಿರುವ ಮಾಹಿತಿ ಪಡೆದು ಧಾವಿಸಿದ ಅರಣ್ಯಾಧಿಕಾರಿಗಳು ಅದನ್ನು ಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಕಾಡಾನೇ ಆಗಿರುವುದರಿಂದ ಹಿಡಿಯುವುದು ಕಷ್ಟ, ಅದಕ್ಕೆ ಅರವಳಿಕೆಯ ಮದ್ದು ನೀಡಿ ನಂತರವಷ್ಟೇ ಬೃಹತ್ ಲಾರಿಯಲ್ಲಿ ಪುನಃ ಅರಣ್ಯಕ್ಕೆ ಸೇರಿಸುವುದು ಉತ್ತಮ ಉಪಾಯವೆಂದು ಚರ್ಚೆ ನಡೆದಿದೆ.



ಕಳೆದ ವರ್ಷ ಚಿರತೆ ಬೆಳಗಾವಿಯ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರೊಬ್ಬರನ್ನು ಗಾಯಗೊಳಿಸಿ ನಂತರ ರೇಸ್ ಕೋರ್ಸ ಮೈದಾನದಲ್ಲಿ ಸೇರಿ ಸುಮಾರು 1 ತಿಂಗಳು ಪೊಲೀಸರನ್ನು, ಅರಣ್ಯ ಅಧಿಕಾರಿಗಳನ್ನು ಅಲೆದಾಡಿಸಿತ್ತು.

ಜನರಲ್ಲಿ ಆತಂಕ ಸೃಷ್ಟಿ ಮಾಡಿ ಓರ್ವನಿಗೆ ಗಾಯ ಮಾಡಿ‌ ಹೋಗಿತ್ತು. ಈಗ ಆನೆ ಕಂಡ ಜನರಲ್ಲಿ ಆತಂಕ ಉಂಟಾಗಿದೆ.



ಕಳೆದ ಒಂದೆರಡು ದಶಕಗಳಲ್ಲಿ ಮನುಷ್ಯನ ಹಣದ ದಾಹಕ್ಕೆ ಅರಣ್ಯ ಪ್ರದೇಶ ಕಬಳಿಕೆ ಅವ್ಯಾಹತವಾಗಿ ನಡೆದಿದ್ದು ಅರಣ್ಯ ಜೀವಿಗಳಿಗೆ ನೆಲೆ ಇಲ್ಲದಂತಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ