LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವ್ಯಸನಮುಕ್ತ ಸಮಾಜ ನಿರ್ಮಾಣದ ಆಶಯದೊಂದಿಗೆ ಹಾವೇರಿಯ ಹುಕ್ಕೇರಿಮಠದ ಅಂಗಳದಲ್ಲಿ ಚಟ ಹೋಮ ಜರುಗಿಸಿದ ಶ್ರೀಗಳು:

ಹಾವೇರಿ: ನಗರದ ಹುಕ್ಕೇರಿಮಠದ ಅಂಗಳದಲ್ಲಿ ಚಟ ಹೋಮ ನೆರವೇರಿಸುವ ಮೂಲಕ ಸದಾಶಿವ ಸ್ವಾಮೀಜಿ ಜೋಳಿಗೆಯಲ್ಲಿ ಸಂಗ್ರಹವಾಗಿದ್ದ ಬೀಡಿ, ಸಿಗರೇಟ್, ಗುಟ್ಕಾ ಹಾಗೂ ಸಾರಾಯಿ ಪಾಕೀಟುಗಳನ್ನು ದಹಿಸಲಾಯಿತು.

ಈ ವೇಳೆ ಮಾತನಾಡಿದ ಸದಾಶಿವ ಸ್ವಾಮೀಜಿ, ಕಲ್ಯಾಣ ರಾಜ್ಯ ನಿರ್ಮಾಣದ ಸಣ್ಣ ಪ್ರಯತ್ನವೇ ದುಶ್ಚಟಗಳ ಭಿಕ್ಷೆ ಸದ್ಗುಣಗಳ ದೀಕ್ಷೆ. ವ್ಯಸನಮುಕ್ತ ಸಮಾಜ ನಿರ್ಮಾಣದ ಆಶಯದೊಂದಿಗೆ ತಾಲೂಕಿನ ೭೦ಕ್ಕೂ ಹೆಚ್ಚು ಹಳ್ಳಿಗಳು ಹಾಗೂ ಹಾವೇರಿ ನಗರದಲ್ಲಿ ಪಾದಯಾತ್ರೆ ಮೂಲಕ ಸಂಚರಿಸುವ ವೇಳೆ ಜೋಳಿಗೆಯಲ್ಲಿ ಚಟಗಳ ಪಾಕೀಟುಗಳು ಸಂಗ್ರಹವಾಗಿದ್ದವು. ಪಾದಯಾತ್ರೆ ಸಂದರ್ಭದಲ್ಲಿ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೋಳಿಗೆಯಲ್ಲಿದ್ದ ಚಟಗಳ ಪಾಕೀಟುಗಳನ್ನು ಹೋಮ ಮಾಡುವ ಮೂಲಕ ಸುಡಲಾಯಿತು. ಒಂದು ಬತ್ತಿ ತನ್ನನ್ನು ತಾನು ಸುಟ್ಟುಕೊಂಡು ಬೆಳಕು ನೀಡುವಂತೆ ಚಟ ಬಿಟ್ಟವರ ಚೀಟುಗಳು ಸುಟ್ಟು ಜನರು ತಮ್ಮ ಮನೆಗಳಿಗೆ ಬೆಳಕಾಗಬೇಕು ಎಂಬುದೇ ನಮ್ಮ ಸಂಕಲ್ಪ. ಅದು ಈಡೇರಿದೆ ಎಂದರು.

ಚಟ ಹೋಮದ ವಿಧಿ ವಿಧಾನ ನೆರವೇರಿಸಿದ ಹೇರೂರಿನ ನಂಜುAಡ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, ನಮ್ಮ ನಾಡಿನಲ್ಲಿ ಯುವಕರು ಚಟ ಬಿಟ್ಟು ಆರೋಗ್ಯವಂತರಾಗಬೇಕು. ದುಶ್ಚಟಗಳಿಗೆ ಅಂಟಿಕೊAಡು ಅಪರಾಧ ಕೃತ್ಯ ಮಾಡುತ್ತಿರುವರು. ವ್ಯಸನಗಳಿಂದ ವಿಚಲಿತರಾಗಿ ಮನಸ್ಸುಗಳು ಕದಡುತ್ತಿವೆ. ಇಂಥ ಸಂದರ್ಭದಲ್ಲಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಿರುವ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿಯವರ ಜೋಳಿಗೆಯಲ್ಲಿ ದುಶ್ಚಟಗಳ ಪಾಕೀಟುಗಳಿದ್ದವು. ಅವುಗಳನ್ನು ಸುಡುವ ಮೂಲಕ ಚಟ ಹೋಮ ನೆರವೇರಿಸಲಾಗಿದೆ. ಜನರು ಇನ್ಮುಂದೆ ಚಟ ಬಿಟ್ಟು ಸದ್ಗುಣ ಅಳವಡಿಸಿಕೊಳ್ಳಲಿ ಎಂದರು.

ಮಾದನ ಹಿಪ್ಪರಗಿಯ ಅಭಿನವ ಶಿವಲಿಂಗ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ, ಕೂಡಲದ ಗುರುಮಹೇಶ್ವರ ಸ್ವಾಮೀಜಿ, ವಿಜಯಪುರದ ಅಭಿನವ ಷಣ್ಮುಖರೂಢs ಸ್ವಾಮೀಜಿ, ರಾವೂರಿನ ಸಿದ್ಧಲಿಂಗ ಸ್ವಾಮೀಜಿ, ಉದ್ಯಮಿ ಪಿ.ಡಿ.ಶಿರೂರ ಇದ್ದರು.

ಬಾಕ್ಸ್:-

ಆಧ್ಯಾತ್ಮಿ ಪ್ರವಚನ ಮಂಗಲೋತ್ಸವ ಇಂದು

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಧ್ಯಾತ್ಮಿಕ ಪ್ರವಚನ ಮಂಗಲೋತ್ಸವ, ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಹಾಗೂ ಮಹಿಳಾ ಗೋಷ್ಠಿ ಡಿ.೨೫ರಂದು ಸಂಜೆ ೬.೩೦ಕ್ಕೆ ಜರುಗಲಿದೆ.

ಹುಬ್ಬಳ್ಳಿಯ ಮೂರುಸಾವಿರಮಠದ ಜಗದ್ಗುರು ಡಾ.ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮೀಜಿ ಹಾಗೂ ಶಿರಸಿ ಬಣ್ಣದ ಮಠದ ಶ್ರೀ ಅಟವಿ ಶಿವಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ, ಮುರಗೋಡದ ಮಹಾಂತ ದುರದುಂಡೀಶ್ವರ ಮಠದ ಶ್ರೀ ನೀಲಕಂಠ ಮಹಾಸ್ವಾಮೀಜಿ ಅಧ್ಯಕ್ಷತೆ, ಕೂಡಲದ ಶ್ರೀ ಷ.ಬ್ರ. ಗುರುಮಹೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. ಗೌರಿಗದ್ದೆ ಅವಧೂತ ಆಶ್ರಮದ ವಿನಯ್ ಗುರೂಜಿ ಉದ್ಘಾಟಿಸುವರು. ಶೇಗುಣಸಿ ವಿರಕ್ತಮಠದ ಡಾ.ಮಹಾಂತಪ್ರಭು ಮಹಾಸ್ವಾಮೀಜಿ ಅವರಿಂದ ಪ್ರವಚನ ಮಂಗಲ ನುಡಿ ಜರುಗುವುದು. ಹರಸೂರು ಬಣ್ಣದ ಮಠದ ಶ್ರೀ ಷ.ಬ್ರ. ಅಭಿನವ ರುದ್ರಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಸಮ್ಮುಖ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಿಂಫೀರ್ ಎಸ್.ಖಾದ್ರಿ, ಮಾಜಿ ಸಂಸದರಾದ ಶಿವಕುಮಾರ ಉದಾಸಿ, ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಜಿಪಂ ಸಿಇಒ ರುಚಿ ಬಿಂದಾಲ್, ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ತಹಶೀಲ್ದಾರ್ ಶರಣಮ್ಮ, ಡಾ.ಶ್ವೇತಾ ದಾನಮ್ಮನವರ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳಾ ಜೈನ್ ಅವರನ್ನು ಸನ್ಮಾನಿಸಲಾಗುವುದು. ಬಿಗ್ ಬಾಸ್ ಖ್ಯಾತಿಯ ಹನುಮಂತ ಲಮಾಣಿ ಹಾಗೂ ಸಂಗಡಿಗರಿAದ ಸಂಗೀತ ಸಂಜೆ ನೆರವೇರಲಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು