LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಲಿಫ್ಟನಲ್ಲಿ ಪತ್ತೆಯಾಯ್ತು ಸುಟ್ಟು ಕರಕಲಾದ ಯಲ್ಲಪ್ಪನ ಶವ

ಬೆಳಗಾವಿ : ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ ಅಂತಾರಾಷ್ಟ್ರೀಯ ಇನ್ಸುಲಿನ್ ಟೇಪ್ ಉತ್ಪಾದನಾ ಕಾರ್ಖಾನೆಗೆ ನಿನ್ನೆ ರಾತ್ರಿ ಬೆಂಕಿ ತಗುಲಿದಾಗ ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೇ ಕಾರ್ಖಾನೆಯಲ್ಲಿ ಲಿಫ್ಟನಲ್ಲಿ ಸಿಲುಕಿದ್ದ 20 ವರ್ಷದ ಯಲ್ಲಪ್ಪನ ದೇಹ ಸಂಪೂರ್ಣ ಸುಟ್ಟು ಕರಕಲಾಗಿದ್ದು ಆಸ್ತಿ ಪಂಜರಗಳು ಮಾತ್ರ ಪತ್ತೆಯಾಗಿವೆ.



ನಿರಂತರವಾಗಿ ಎಸ್ ಡಿಆರ್ ಎಫ್ ತಂಡ 17 ಗಂಟೆ ಕೆಲಸ ಮಾಡಿದೆ. ಯಲ್ಲಪ್ಪನ ಆಸ್ತಿ ಪಂಜರವನ್ನು ಎಫ್ ಎಸ್ ಎಲ್ ವರದಿಗೆ ಕಳುಹಿಸಿ ವಿಧಿ ವಿಧಾನವನ್ನು ಪೂರೈಸಲಿದೆ.



ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಸೊಸೆ ಡಾ. ಹಿತಾ ಮೃಣಾಲ್ ಬುಧವಾರ ಭೇಟಿ ನೀಡಿ ಅವಶೇಷದಲ್ಲಿ ಸಿಲುಕಿರುವ ಯಲ್ಲಪ್ಪನ ಕುಟುಂಬಕ್ಕೆ ಸಾಂತ್ವನ ಹೇಳಿದರು.



ನಮ್ಮ ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗ ಮೃತಪಟ್ಟಿದ್ದಾನೆ. ನಮಗೆ ನ್ಯಾಯ ಕೊಡಿಸಬೇಕೆಂದು ಅವಶೇಷದಲ್ಲಿ ಸಿಲುಕಿರುವ ಯಲ್ಲಪ್ಪನ ಕುಟುಂಬಸ್ಥರು ಡಾ. ಹಿತಾ ಮುಂದೆ ಗೋಳಾಡಿದರು.



ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಹಿತಾ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು ಬೆಂಗಳೂರಿನಲ್ಲಿರುವುದರಿಂದ ನಾನು ಬಂದಿದ್ದೇನೆ. ಮೃತರ ಕುಟುಂಬಕ್ಕೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ವೈಯಕ್ತಿಕವಾಗಿ ಹಾಗೂ ಸರಕಾರದಿಂದ ಪರಿಹಾರ ಕೊಡಲಾಗುವುದು ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು