LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಿನ್ನಿಸ್ ದಾಖಲೆ ನಿರ್ಮಾಣದ ಗುರಿ; ಸುವರ್ಣ ವಿಧಾನಸೌಧ ಆವರಣದಲ್ಲಿ "ಯೋಗ"ಥಾನ

ಬೆಳಗಾವಿ, ಜ.15 : ಸೂರ್ಯ ಪಥ ಬದಲಾಯಿಸಿದ ಸಂಕ್ರಮಣದ ಶುಭ ದಿನ ರಾಜ್ಯವನ್ನು ದೇಶದ ಮೊದಲ "ಯೋಗ ಸಾಕ್ಷರತಾ ರಾಜ್ಯ"ವನ್ನಾಗಿಸುವುದರ ಜತೆಗೆ ಯೋಗ ಪ್ರದರ್ಶನದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸುವ ಭಾಗವಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ರವಿವಾರ ಬೃಹತ್ ಯೋಗಥಾನ-2023 ಕಾರ್ಯಕ್ರಮ ನಡೆಯಿತು.



ಮುಂಜಾನೆಯ ಮಂಜು ಮುಸುಕಿದ ವಾತಾವರಣದಲ್ಲಿ ನೇಸರನ ಹೊಂಗಿರಣಗಳ ಮಧ್ಯೆ ಸುವರ್ಣ ವಿಧಾನಸೌಧದ ಪಶ್ಚಿಮದ್ವಾರದ ಮೆಟ್ಟಿಲುಗಳ ಎದುರು ಸಾವಿರಾರು ಜನರು ಯೋಗ ಪ್ರದರ್ಶಿಸಿದರು.



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಆಯುಷ್ ಇಲಾಖೆ, ನೆಹರು ಯುವಕೇಂದ್ರ, ಎನ್.ಎಸ್.ಎಸ್., ಎನ್.ಸಿ.ಸಿ., ಆಯುಷ್ ಟಿವಿ ಹಾಗೂ ವಿವಿಧ ಯೋಗ ಸಂಸ್ಥೆಗಳ ಆಶ್ರಯದಲ್ಲಿ ಯೋಗಥಾನ ಹಮ್ಮಿಕೊಳ್ಳಲಾಗಿತ್ತು.



ನಾಡಗೀತೆಯೊಂದಿಗೆ ಆರಂಭಗೊಂಡ ಯೋಗಥಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.



ಯೋಗಥಾನಗೆ ಚಾಲನೆ ನೀಡಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು, ಯೋಗದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಲು ರಾಜ್ಯದಾದ್ಯಂತ ಯೋಗಥಾನ ಹಮ್ಮಿಕೊಳ್ಳಲಾಗಿದೆ ಎಂದರು.



ಯೋಗಸಾಧನೆಯಲ್ಲಿ ಗಿನ್ನಿಸ್ ದಾಖಲೆ ಮಾಡಲು ರಾಜ್ಯದಲ್ಲಿ ಏಕಕಾಲದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುತ್ತಿದ್ದಾರೆ. ಯೋಗದಿಂದ ಆರೋಗ್ಯಕರ ಮತ್ತು ಸಂತೋಷಕರ ಬದುಕು ಸಾಧ್ಯವಾಗಲಿದೆ ಎಂದರು.



ಇಂದಿನ ಯೋಗಥಾನ ಮೂಲಕ ಕರ್ನಾಟಕ ರಾಜ್ಯವನ್ನು ದೇಶದ ಮೊದಲ "ಯೋಗ ಸಾಕ್ಷರತಾ ರಾಜ್ಯ" ವನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.



ಜಿಲ್ಲಾಧಿಕಾರಿ‌ ನಿತೇಶ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಸಿಓ 25 ಕರ್ನಾಟಕ ಬಟಾಲಿಯನ್ ಲೆಫ್ಟಿನೆಂಟ ಕರ್ನಲ್ ನಂದಕುಮಾರ, ಸುಬೇದಾರ ಮೇಜರ್ ಹರದೇವ ಸಿಂಗ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜವಳಿ ಮತ್ತು ಕೈಮಗ್ಗ ಇಲಾಖೆಯ ಉಪ ನಿರ್ದೇಶಕ ದೊಡ್ಡಮನಿ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಬಸವರಾಜ ನಾಲತವಾಡ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಜಿನೇಶ್ವರ ಪಡನಾಡ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಜಿಲ್ಲಾ ಯೋಗಾ ಸಂಯೋಜಕಿ ಆರತಿ ಸಂಕೇಶ್ವರಿ ಮತ್ತು ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಯೋಗ ತರಬೇತುದಾರರು, ಎನ್.ಸಿ.ಸಿ. ಕೆಡೆಟ್ ಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಕೆಡೆಟ್ ಗಳು ಯೋಗ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಸುನೀತಾ ದೇಸಾಯಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.



45 ನಿಮಿಷಗಳ ಕಾಲ ನಡೆದ ಯೋಗ ಪ್ರದರ್ಶನದಲ್ಲಿ ನಗರದ ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಗಮನಸೆಳೆದರು. ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಯೋಗಥಾನ ಕಾರ್ಯಕ್ರಮಕ್ಕೆ ನೋಂದಾಯಿಸಿದ ಶಾಲೆ, ಕಾಲೇಜುಗಳಿಗೆ ಬಹುಮಾನ ನೀಡಲಾಯಿತು.

ಶಾಲಾ ವಿಭಾಗದಲ್ಲಿ ಲಿಟಲ್ ಸ್ಕಾಲರ್ ಸ್ಕೂಲ್, ಬೆಳಗಾವಿ, ಕಾಲೇಜು ವಿಭಾಗದಲ್ಲಿ ಸರಕಾರಿ ಸರಸ್ವತಿ ಪದವಿಪೂರ್ವ ಕಾಲೇಜು, ಶಹಾಪುರ ಇವರಿಗೆ ಜಿಲ್ಲಾಧಿಕಾರಿ ಬಹುಮಾನ ನೀಡಿದರು.



ಗಾಲ್ಫ ಮೈದಾನದಲ್ಲೂ ಯೋಗಥಾನ:



ಇದೇ ರೀತಿಯ ಇನ್ನೊಂದು ಕಾರ್ಯಕ್ರಮವು ಜಿಲ್ಲಾಡಳಿತದ ಸಹಯೋಗದಲ್ಲಿ ಬೆಳಗಾವಿ ನಗರದ ಗಾಲ್ಫ ಮೈದಾನದಲ್ಲಿ ಕೂಡ ನಡೆಯಿತು. ಜಿಲ್ಲಾ ಆಯುಷ್ ಡಾ.ಶ್ರೀಕಾಂತ ಸುಣಧೋಳಿ ಅವರ ನೇತೃತ್ವದಲ್ಲಿ ಅಲ್ಲಿಯೂ ಕೂಡ ಸಾವಿರಾರು ಜನರು ಪಾಲ್ಗೊಂಡಿದ್ದರು.







Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು