LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆನ್ ಲೈನ್ ಬೆಟ್ಟಿಂಗ್ ವಿಚಾರಣೆಗೆ ಹಾಜರಾದ ಯುವರಾಜ ಸಿಂಗ್

ನವದೆಹಲಿ: ಕಾನೂನುಬಾಹಿರ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌



ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಮಂಗಳವಾರ ವಿಚಾರಣೆಗೆ ಹಾಜರಾಗಿದ್ದಾರೆ.



ಪ್ರಕರಣ ಸಂಬಂಧ ಯುವರಾಜ್ ಸಿಂಗ್ ಅವರು ತಮ್ಮ ವಕೀಲರೊಂದಿಗೆ ದೆಹಲಿಯ ಇ.ಡಿ ಕೇಂದ್ರ ಕಚೇರಿಗೆ 2 ಗಂಟೆ ತಡವಾಗಿ ಬಂದಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ. ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.



ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಇ.ಡಿ ಅಧಿಕಾರಿಗಳು ಈಚೆಗೆ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಹಾಗೂ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದರು. ಅದರಂತೆ ಉತ್ತಪ್ಪ ಅವರು ಸೋಮವಾರ ಇ.ಡಿ ವಿಚಾರಣೆಗೆ ಹಾಜರಾಗಿದ್ದರು. ಬುಧವಾರ (ಸೆ. 24ರಂದು) ನಟ ಸೋನು ಸೂದ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಇದೇ ಪ್ರಕರಣ ಸಂಬಂಧ ಇ.ಡಿ.ಯು ಈಗಾಗಲೇ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್, ಟಿಎಂಸಿ ಮಾಜಿ ಸಂಸದೆ ಮಿಮಿ ಚಕ್ರವರ್ತಿ, ಬಂಗಾಳಿ ನಟ ಅಂಕುಶ್‌ ಹಜ್ರಾ ಅವರ ವಿಚಾರಣೆ ನಡೆಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ